ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ಪ್ರಗತಿ | ಪ್ರಾತ್ಯಕ್ಷಿಕೆಯ ವಿಡಿಯೋದಲ್ಲಿದೆ ಕಾರ್ಮಿಕರನ್ನು ಹೊರತರುವ ಪ್ಲಾನ್

November 24, 2023
3:33 PM

ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಸುರಂಗದಲ್ಲಿ (Tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ (Rescue operation) ಇಂದಿಗೆ (ಶುಕ್ರವಾರ) 13ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ತಡರಾತ್ರಿ ತಾಂತ್ರಿಕ ಅಡಚಣೆಯಿಂದಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ವಿಳಂಬವಾಗಿದೆ. ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse)  ಸಿಲುಕಿರುವ ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್‌ಲೈನ್‌ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್‌ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್‌ ಮಾಡಿರುವ ಪೈಪ್‌ಲೈನ್‌. ಎನ್‌ಡಿಆರ್‌ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್‌ ಭಾಗದ ಪೈಪ್‌ಲೈನ್‌ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್‌ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

Source : ANI

The rescue operation to save 41 workers stuck in the tunnel in Uttarakhand (Uttarakhand) has entered the 13th day today (Friday). A technical glitch delayed the rescue operation late last night. The National Disaster Management Force demonstrated how to safely evacuate workers trapped in the Silkyara Tunnel (Tunnel Collapse). Its video has been shared.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror