Advertisement
MIRROR FOCUS

ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ಪ್ರಗತಿ | ಪ್ರಾತ್ಯಕ್ಷಿಕೆಯ ವಿಡಿಯೋದಲ್ಲಿದೆ ಕಾರ್ಮಿಕರನ್ನು ಹೊರತರುವ ಪ್ಲಾನ್

Share

ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಸುರಂಗದಲ್ಲಿ (Tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ (Rescue operation) ಇಂದಿಗೆ (ಶುಕ್ರವಾರ) 13ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ತಡರಾತ್ರಿ ತಾಂತ್ರಿಕ ಅಡಚಣೆಯಿಂದಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ವಿಳಂಬವಾಗಿದೆ. ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse)  ಸಿಲುಕಿರುವ ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್‌ಲೈನ್‌ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್‌ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್‌ ಮಾಡಿರುವ ಪೈಪ್‌ಲೈನ್‌. ಎನ್‌ಡಿಆರ್‌ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್‌ ಭಾಗದ ಪೈಪ್‌ಲೈನ್‌ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್‌ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

Source : ANI

The rescue operation to save 41 workers stuck in the tunnel in Uttarakhand (Uttarakhand) has entered the 13th day today (Friday). A technical glitch delayed the rescue operation late last night. The National Disaster Management Force demonstrated how to safely evacuate workers trapped in the Silkyara Tunnel (Tunnel Collapse). Its video has been shared.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

10 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

10 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

15 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

15 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

15 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago