Advertisement
ಗ್ರಾಮೀಣ

ಜೇನುಸಾಕಣೆಗೆ ಉತ್ತೇಜನ – ಸರ್ಕಾರದಿಂದ NBHM ಮೂಲಕ ನೆರವು

Share

ಜೇನುಸಾಕಣೆ ಕೇವಲ ಒಂದು ಉಪಕಸುಬು ಮಾತ್ರವಲ್ಲ, ಹಲವಾರು ಕುಟುಂಬಗಳಿಗೆ ಜೇನುಸಾಕಣೆಯೇ ಮುಖ್ಯ ಉದ್ಯೋಗವಾಗಿದೆ. ಜೇನುತುಪ್ಪ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಗುರಿ ಹೊಂದಿರುವ ಕೇಂದ್ರ ಸರ್ಕಾರ ಈ ಈ ನಿಟ್ಟಿನಲ್ಲಿ ವೈಜ್ಞಾನಕ ವಿಧಾನದಲ್ಲಿ ಜೇನುಸಾಕಣೆಗೆ ಉತ್ತೇಜಿಸಲು ನ್ಯಾಷನಲ್ ಬೀಕೀಪಿಂಗ್ ಅಂಡ್ ಹನಿ ಮಿಷನ್ ಅನ್ನು ನಡೆಸುತ್ತಿದೆ.

ರಾಷ್ಟ್ರೀಯ ಜೇನು ಮಂಡಳಿ ಮೂಲಕ 2020-21ರಲ್ಲಿ ರಾಷ್ಟ್ರೀಯ ಜೇನುಸಾಕಣೆ ಮಿಷನ್ ಅನ್ನು 500 ಕೋಟಿ ರೂ ಬಜೆಟ್ ನಲ್ಲಿ ಮೂರು ವರ್ಷಗಳಿಗೆ ಆರಂಭಿಸಲಾಗಿತ್ತು. ನಂತರ ಇನ್ನೂ ಮೂರು ವರ್ಷ ವಿಸ್ತರಿಸಲಾಗಿದೆ. ಈ ಸ್ಕೀಮ್ 2025-26ವರೆಗೂ ಇರುತ್ತದೆ. ಅಂದರೆ 2026ರ ಮಾರ್ಚ್ 31 ರವರೆಗೂ ಜೇನುಸಾಕಣೆ ಯೋಜನೆ ಚಾಲನೆಯಲ್ಲಿ ಇರಲಿದೆ.

ಭಾರತದಲ್ಲಿ ಜೇನುಸಾಕಣೆಗೆ ಅನುಕೂಲವಾಗಿರುವಂತಹ ವೈವಿಧ್ಯಮಯ ಕೃಷಿ ವಾತಾವರಣ ಇದೆ. ಇದು ಗ್ರಾಮೀಣ ಭಾಗದ ಜನರ ಬದುಕಿಗೆ ಆಧಾರವಾಗುವುದರ ಜೊತೆ ಜೇನು ಉತ್ಪನ್ನಗಳಲ್ಲಿ ಸ್ವಾವಲಂಬನೆ ಸಾಧಿಸಲು ಬೇಕಾದ ಸಾಮರ್ಥ್ಯ ಇರುವುದನ್ನು ಸರ್ಕಾರ ಕಂಡುಕೊಂಡಿದೆ. ಈ ಕಾರಣಕ್ಕೆ ರಾಷ್ಟ್ರೀಯ ಜೇನುಸಾಕಾಣೆ ಯೋಜನೆ(ಎನ್ ಬಿಎಚ್ಎಂ) ಅನ್ನು ಸರ್ಕಾರ ಹಮ್ಮಿಕೊಂಡಿದೆ.

ಜೇನುಸಾಕಣೆ ಯೋಜನೆಯನ್ನು ಮೂರು ಮುಖ್ಯ ಉಪಮಿಷನ್ ಗಳಾಗಿ ವಿಂಗಡಿಸಲಾಗಿದೆ. ಮೊದಲನೇ ಮಿಷನ್ ನಲ್ಲಿ ವೈಜ್ಞಾನಿಕವಾಗಿ ಜೇನುಸಾಕಣೆ ಮೂಲಕ ಬೆಳೆಗಳ ಉತ್ಪಾದನೆಗೆ ಪುಷ್ಟ ಕೊಡಲಾಗುತ್ತದೆ. ಎರಡನೇ ಮಿಷನ್ ನಲ್ಲಿ ಜೇನು ಉತ್ಪನ್ನಗಳ ಸಂಗ್ರಹ ಸಂಸ್ಕರಣೆ, ಮಾರಾಟ, ಮೌಲ್ಯ ವರ್ಧನೆ ಇತ್ಯಾದಿ ಕಾರ್ಯಗಳತ್ತ ಗಮನ ನೀಡಲಾಗುತ್ತದೆ. ಮೂರನೇ ಮಿನಿ ಮಿಷನ್ ನಲ್ಲಿ ವಿವಿಧ ಪ್ರದೇಶಗಳ ವಾತಾವರಣ ಮತ್ತು ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಸೂಕ್ತ ವಿಧಾನದ ಜೇನುಸಾಕಣೆಗೆ ಬೇಕಾದ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಪಡಿಸಲು ಒತ್ತುಕೊಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

12 minutes ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

19 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago