Advertisement
MIRROR FOCUS

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

Share

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ ಹಲಸು ಬೆಳೆಯ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಐಐಎಚ್‌ಆರ್‌ ವಿಜ್ಞಾನಿಗಳು ಮಾಹಿತಿ ನೀಡಿದರು.ಇದೇ ವೇಳೆ ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಪ್ರಚಾರದ ಕುರಿತು ಚರ್ಚೆ ನಡೆಸಿದರು.…..ಮುಂದೆ ಓದಿ….

ಭಾರತದ ವಿವಿಧ ರಾಜ್ಯಗಳಲ್ಲಿ ವಿಸ್ತೀರ್ಣ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುವ ಕಮಲಂ(ಡ್ರಾಗನ್‌ ಫ್ರುಟ್) ಆಯ್ಕೆಗಳಾದ ಐಐಎಚ್‌ಆರ್ ಪಿಂಕ್ ಮತ್ತು ಐಐಎಚ್‌ಆರ್ ವೈಟ್ ಬಗ್ಗೆ  ಸಚಿವರಿಗೆ ಮಾಹಿತಿ ನೀಡಿದರು.ಕಮಲಂ ಲಾಭದಾಯಕ ಹಣ್ಣಿನ ಬೆಳೆಯಾಗಿದ್ದು, ಇದನ್ನು ಮೆಕ್ಸಿಕೊ, ಆಸ್ಟ್ರೇಲಿಯಾ, ಥೈಲ್ಯಾಂಡ್, ತೈವಾನ್, ಇಸ್ರೇಲ್ ಇತ್ಯಾದಿ ದೇಶಗಳಲ್ಲಿ ವಾಣಿಜ್ಯಿಕವಾಗಿ ಬೆಳೆಸಲಾಗುತ್ತಿದೆ. ಆದರೆ ಈಗ ಭಾರತದ ರೈತರಲ್ಲಿ ಜನಪ್ರಿಯತೆಯನ್ನು ಗಳಿಸುತ್ತಿದೆ. ಕಮಲಂನಲ್ಲಿನ ಸುಧಾರಿತ ತಳಿಶಾಸ್ತ್ರ ಮತ್ತು ತಳಿಗಳು ಈ ಬೆಳೆಯ ವಿಸ್ತೀರ್ಣ ವಿಸ್ತರಣೆಗೆ ಮತ್ತು ರೈತರ ಆದಾಯವನ್ನು ಸುಧಾರಿಸಲು ದಾರಿ ಮಾಡಿಕೊಡುತ್ತವೆ ಎಂಬ ಮಾಹಿತಿಯನ್ನು ವಿಜ್ಞಾನಿಗಳು ನೀಡಿದರು.

ಕೃಷಿ-ಗ್ರಾಮೀಣ ಹಾಗೂ ಪರಿಸರಕ್ಕೆ ಸಂಬಂಧಿಸಿದ ರಚನಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡುವ ನಮ್ಮ www.theruralmirror.com ಇದರ WhatsApp ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ...

ಕೆಂಪು ಬಣ್ಣದ ಹಲಸಿನ ಹಣ್ಣು ಸಿದ್ದು ಮತ್ತು ಶಂಕರ ಪ್ರಭೇದಗಳನ್ನು ಐಸಿಎಆರ್‌ ಮತ್ತು ಐಐಎಚ್‌ ಆರ್ ಬೆಂಬಲದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಮತ್ತು ಅವು ಹಲಸಿನ ಹಣ್ಣಿನ ಕೃಷಿಯ ಮೇಲೆ ಉತ್ತಮ ಪರಿಣಾಮ ಬೀರಿವೆ. 1500 ಕ್ಕೂ ಹೆಚ್ಚು ಎಕರೆಗಳಲ್ಲಿ ಈ ಪ್ರಭೇದವನ್ನು ಬೆಳೆಯಲಾಗುತ್ತಿದೆ. ರೈತರು ಸುಮಾರು 50 ಲಕ್ಷ ರೂ.ಗಳ ಲಾಭವನ್ನು ಪಡೆಯುತ್ತಾರೆ ಎಂದು ವಿಜ್ಞಾನಿಗಳು ವಿವರಿಸಿದರು.

ಮತ್ತೊಂದು ಪ್ರಮುಖ ಹಣ್ಣಿನ ಬೆಳೆಯಾದ ಆವಕಾಡೊ, ರೈತರ ಆದಾಯದ ಸುಸ್ಥಿರತೆಗಾಗಿ ದೊಡ್ಡ ಪ್ರಮಾಣದಲ್ಲಿ ಕೃಷಿ ಮಾಡಬಬಹುದಾಗಿದೆ. ಈ ನಿಟ್ಟಿನಲ್ಲಿ ಐಐಎಚ್‌ಆರ್ ಎರಡು ಪ್ರಭೇದಗಳಾದ ಅರ್ಕಾ ಸುಪ್ರೀಂ ಮತ್ತು ಅರ್ಕಾ ರವಿಯನ್ನು ಬಿಡುಗಡೆ ಮಾಡಿದೆ. ಈ ಪ್ರಭೇದಗಳು ನಿಯಮಿತವಾಗಿ ಫಲ ನೀಡುವ, ಹೆಚ್ಚಿನ ಇಳುವರಿ ನೀಡುವ. 400-600 ಗ್ರಾಂ ಹಣ್ಣಿನ ತೂಕವನ್ನು ಹೊಂದಿದ್ದು, ಸುಮಾರು 80% ತಿರುಳು ಮತ್ತು ಉಷ್ಣವಲಯದ ಪ್ರದೇಶಗಳಲ್ಲಿ ಕೃಷಿಗೆ ಸೂಕ್ತವಾಗಿದೆ ಎಂಬ ಮಾಹಿತಿಯನ್ನು ಸಚಿವರಿಗೆ ನೀಡಿದರು.  ಈ ಹಣ್ಣಿನ ಬೆಳೆಗಳನ್ನು ಉತ್ತೇಜಿಸಲು ತೋಟಗಾರಿಕಾ ವಿಜ್ಞಾನ ವಿಭಾಗ, ಐಸಿಎಆರ್ ಮತ್ತು ಐಸಿಎಆರ್-ಐಐಎಚ್ಆರ್ ಬೆಂಗಳೂರಿನ ಪ್ರಯತ್ನಗಳನ್ನು  ಸಚಿವರು ಶ್ಲಾಘಿಸಿದರು.

ಈ ಸಂದರ್ಭ  ಡಾ. ದೇವೇಶ್ ಚತುರ್ವೇದಿ,  ಡಾ. ವಿಬಿ ಪಟೇಲ್,  ಪ್ರಿಯ ರಂಜನ್ ಮತ್ತು ಬೆಂಗಳೂರಿನ ಐಐಎಚ್‌ಆರ್ ಪ್ರಧಾನ ವಿಜ್ಞಾನಿ ಡಾ. ಜಿ ಕರುಣಾಕರನ್ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

38 minutes ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

1 hour ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

23 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago