MIRROR FOCUS

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಹಾರಗಳಲ್ಲಿ(Food) ಮೀನು(Fish) ಕೂಡ ಪ್ರಮುಖ ಭಾಗ ವಹಿಸುತ್ತದೆ. ಮಾಂಸಾಹಾರಿಗಳಲ್ಲಿ(Non veg) ಸಮುದ್ರಾಹಾರ(Sea-food) ಬಯಸಿ ತಿನ್ನುವವರು ಬಹುಪಾಲು ಮಂದಿ. ಮತ್ಸ್ಯೋದ್ಯಮ(Fishery) ಬೃಹತ್‌ ಉದ್ಯಮವಾಗಿ ಬೆಳೆದಿದೆ. ಆರ್ಥಿಕವಾಗಿ(Economy) ವಹಳ ದೊಡ್ಡದಾಗಿ ಬೆಳೆದಿದೆ. ಸಮುದ್ರಾಹಾರ ಬೇಡಿಕೆ ಹೆಚ್ಚಿಸುವ ಜೊತೆಗೆ ಭಾರತದ(India) ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜಿಸುವ ಉದ್ದೇಶದಿಂದ ಕೇರಳದ(Kerala) ಐಸಿಎಆರ್(ICER)​- ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ಹೊಸ ಸಾಧನೆ ಮಾಡಿದೆ. ಬೀಜ ಉತ್ಪಾದನೆ ತಂತ್ರಜ್ಞಾನದ ಅಭಿವೃದ್ಧಿ ಮೂಲಕ ಗೋಲ್ಡನ್​​ ಟ್ರೆವಲ್ಲಿ ಎಂಬ ಮೀನಿನ ಉತ್ಪಾದನೆಯನ್ನು ಯಶಸ್ವಿಯಾಗಿ ಸಿಎಂಎಫ್​ಆರ್​​ಐ ಮಾಡಿದೆ. ಈ ಅಭಿವೃದ್ಧಿಯು ಸಮುದ್ರಾಹಾರದ ಉತ್ಪಾದನೆ ಮತ್ತು ದೇಶದಲ್ಲಿ ಲಭ್ಯವಿರುವ ತಳಿಗಳ ಅಭಿವೃದ್ಧಿಗೆ ಕಾರಣವಾಗಲಿದೆ.

Advertisement
Advertisement

ವಿಶಾಖಪಟ್ಟಣಂನ ಪ್ರಾದೇಶಿಕ ಕೇಂದ್ರ ಸಿಎಂಎಫ್​ಆರ್​ಐ ವಿಜ್ಞಾನಿಗಳು ಐದು ವರ್ಷಗಳ ಅಧ್ಯಯನದ ಬಳಿಕ ಈ ಮೀನಿನ ರಕ್ತನಾಳದ ಅಭಿವೃದ್ಧಿ, ಸಂತಾನೋತ್ಪತಿ ಸಾಮರ್ಥ್ಯ ಮತ್ತು ಮೀನಿನ ಲಾರ್ವಾ ಸಾಕಾಣಿಯಲ್ಲಿ ಯಶಸ್ವಿ ಸಾಧನೆ ಮಾಡಿದ್ದಾರೆ. ಗೋಲ್ಡನ್​ ಟ್ರೆವಲ್ಲೆ ಅಥವಾ ಗೋಲ್ಡನ್​ ಕಿಂಗ್​ ಫಿಶರ್​ ತಳಿಯ ಮೀನುಗಳು ಸಮುದ್ರ ಜಲ ಕೃಷಿಗೆ ಸೂಕ್ತವಾಗಿದೆ. ಕಾರಣ ಇದು ಬೆಳವಣಿಗೆ ದರ ಮತ್ತು ಉತ್ತಮ ಮಾಂಸದ ಗುಣಮಟ್ಟ ಮತ್ತು ಸೇವನೆ ಹಾಗೂ ಅಲಂಕಾರ ಉದ್ದೇಶದಿಂದ ಇದಕ್ಕೆ ಬೇಡಿಕೆ ಹೆಚ್ಚಿದೆ. ಈ ಮೀನು ಕೆಜಿಗೆ 400 ರಿಂದ 500 ರೂ. ಮೌಲ್ಯವನ್ನು ಹೊಂದಿದೆ.

ಈ ಕುರಿತು ಮಾತನಾಡಿರುವ ಸಿಎಂಎಫ್​ಆರ್​ಐನ ನಿರ್ದೇಶಕ ಗೋಪಾಲ್​ಕೃಷ್ಣನ್​​, ಭಾರತದ ಸಮುದ್ರ ಕೃಷಿಯಲ್ಲಿ ಇದೊಂದು ಗಮನಾರ್ಹ ಮೈಲಿಗಲ್ಲು ಎಂದಿದ್ದಾರೆ. ಅಪೇಕ್ಷಿತ ಗುಣಮಟ್ಟದ ಕಾರಣದಿಂದ ಸಮುದ್ರ ಕೃಷಿಗೆ ಈ ಗೋಲ್ಡನ್​ ಟ್ರೆವಲ್ಲೆ ಉತ್ತಮ ಮೀನಾಗಿದೆ. ಮೀನುಗಾರಿಕೆಯಲ್ಲಿ ಇದರ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿತ್ತು. ಇದೀಗ ಹೊಸ ತಂತ್ರಜ್ಞಾನದ ಮೂಲಕ ಇದರ ಸಂತಾನೋತ್ಪತ್ತಿ ಸಾಮರ್ಥ್ಯದ ಹೆಚ್ಚಳದ ಯಶಸ್ಸು, ಗಮನಾರ್ಹವಾಗಿ ಅದ್ಭುತವಾಗಿದೆ. ಇದು ಸುಸ್ಥಿರ ಮೀನು ಕೃಷಿ ಮೂಲಕ ಸಮುದ್ರದಲ್ಲಿನ ಜಲ ಕೃಷಿಗೆ ಅವಕಾಶವನ್ನು ನೀಡಲಿದೆ.

ಭಾರತದಲ್ಲಿ ಬಂಡೆಗಲ್ಲಿನ ನೀರಿನ ಪ್ರದೇಶದಲ್ಲಿ ಈ ಮೀನುಗಳನ್ನು ಕಾಣಬಹುದಾಗಿದೆ. ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ ಮತ್ತು ಗುಜರಾತ್​ನಲ್ಲಿ ಇವು ಹೆಚ್ಚು ಕಂಡುಬರುತ್ತವೆ. ಇವು ಸಿಲ್ವರ್​ ಗ್ರೇ ಬಣ್ಣದ ಜೊತೆ ಹಳದಿ ಬಣ್ಣದ ಮೀನುಗಳಾಗಿವೆ. ನೋಡಲು ಆಕರ್ಷಣಿಯವಾಗಿರುವ ಹಿನ್ನೆಲೆ ಅಕ್ವೇರಿಯಂನಲ್ಲೂ ಸಹ ಇವುಗಳನ್ನು ಇಡುತ್ತಾರೆ. ಈ ತಳಿಗಳ ಅಲಂಕಾರಿಕ ಒಂದು ಮೀನಿನ ಬೆಲೆ 150 ರಿಂದ 250 ರೂ. ಇದೆ. 2019ರಲ್ಲಿ ಈ ಮೀನಿನ ಬೀಜದ ಉತ್ಪಾದನೆ ಪ್ರಯತ್ನವನ್ನು ವಿಶಾಖಪಟ್ಟಣಂ ಪ್ರಾದೇಶಿಕ ಕೇಂದ್ರದಲ್ಲಿ ನಡೆಸಲಾಗಿತ್ತು.

  • ಅಂತರ್ಜಾಲ ಮಾಹಿತಿ
Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

8 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

9 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

9 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

9 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

15 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

22 hours ago