Advertisement
MIRROR FOCUS

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ

Share

ಆಹಾರಗಳಲ್ಲಿ(Food) ಮೀನು(Fish) ಕೂಡ ಪ್ರಮುಖ ಭಾಗ ವಹಿಸುತ್ತದೆ. ಮಾಂಸಾಹಾರಿಗಳಲ್ಲಿ(Non veg) ಸಮುದ್ರಾಹಾರ(Sea-food) ಬಯಸಿ ತಿನ್ನುವವರು ಬಹುಪಾಲು ಮಂದಿ. ಮತ್ಸ್ಯೋದ್ಯಮ(Fishery) ಬೃಹತ್‌ ಉದ್ಯಮವಾಗಿ ಬೆಳೆದಿದೆ. ಆರ್ಥಿಕವಾಗಿ(Economy) ವಹಳ ದೊಡ್ಡದಾಗಿ ಬೆಳೆದಿದೆ. ಸಮುದ್ರಾಹಾರ ಬೇಡಿಕೆ ಹೆಚ್ಚಿಸುವ ಜೊತೆಗೆ ಭಾರತದ(India) ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜಿಸುವ ಉದ್ದೇಶದಿಂದ ಕೇರಳದ(Kerala) ಐಸಿಎಆರ್(ICER)​- ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ಹೊಸ ಸಾಧನೆ ಮಾಡಿದೆ. ಬೀಜ ಉತ್ಪಾದನೆ ತಂತ್ರಜ್ಞಾನದ ಅಭಿವೃದ್ಧಿ ಮೂಲಕ ಗೋಲ್ಡನ್​​ ಟ್ರೆವಲ್ಲಿ ಎಂಬ ಮೀನಿನ ಉತ್ಪಾದನೆಯನ್ನು ಯಶಸ್ವಿಯಾಗಿ ಸಿಎಂಎಫ್​ಆರ್​​ಐ ಮಾಡಿದೆ. ಈ ಅಭಿವೃದ್ಧಿಯು ಸಮುದ್ರಾಹಾರದ ಉತ್ಪಾದನೆ ಮತ್ತು ದೇಶದಲ್ಲಿ ಲಭ್ಯವಿರುವ ತಳಿಗಳ ಅಭಿವೃದ್ಧಿಗೆ ಕಾರಣವಾಗಲಿದೆ.

Advertisement
Advertisement

ವಿಶಾಖಪಟ್ಟಣಂನ ಪ್ರಾದೇಶಿಕ ಕೇಂದ್ರ ಸಿಎಂಎಫ್​ಆರ್​ಐ ವಿಜ್ಞಾನಿಗಳು ಐದು ವರ್ಷಗಳ ಅಧ್ಯಯನದ ಬಳಿಕ ಈ ಮೀನಿನ ರಕ್ತನಾಳದ ಅಭಿವೃದ್ಧಿ, ಸಂತಾನೋತ್ಪತಿ ಸಾಮರ್ಥ್ಯ ಮತ್ತು ಮೀನಿನ ಲಾರ್ವಾ ಸಾಕಾಣಿಯಲ್ಲಿ ಯಶಸ್ವಿ ಸಾಧನೆ ಮಾಡಿದ್ದಾರೆ. ಗೋಲ್ಡನ್​ ಟ್ರೆವಲ್ಲೆ ಅಥವಾ ಗೋಲ್ಡನ್​ ಕಿಂಗ್​ ಫಿಶರ್​ ತಳಿಯ ಮೀನುಗಳು ಸಮುದ್ರ ಜಲ ಕೃಷಿಗೆ ಸೂಕ್ತವಾಗಿದೆ. ಕಾರಣ ಇದು ಬೆಳವಣಿಗೆ ದರ ಮತ್ತು ಉತ್ತಮ ಮಾಂಸದ ಗುಣಮಟ್ಟ ಮತ್ತು ಸೇವನೆ ಹಾಗೂ ಅಲಂಕಾರ ಉದ್ದೇಶದಿಂದ ಇದಕ್ಕೆ ಬೇಡಿಕೆ ಹೆಚ್ಚಿದೆ. ಈ ಮೀನು ಕೆಜಿಗೆ 400 ರಿಂದ 500 ರೂ. ಮೌಲ್ಯವನ್ನು ಹೊಂದಿದೆ.

Advertisement

ಈ ಕುರಿತು ಮಾತನಾಡಿರುವ ಸಿಎಂಎಫ್​ಆರ್​ಐನ ನಿರ್ದೇಶಕ ಗೋಪಾಲ್​ಕೃಷ್ಣನ್​​, ಭಾರತದ ಸಮುದ್ರ ಕೃಷಿಯಲ್ಲಿ ಇದೊಂದು ಗಮನಾರ್ಹ ಮೈಲಿಗಲ್ಲು ಎಂದಿದ್ದಾರೆ. ಅಪೇಕ್ಷಿತ ಗುಣಮಟ್ಟದ ಕಾರಣದಿಂದ ಸಮುದ್ರ ಕೃಷಿಗೆ ಈ ಗೋಲ್ಡನ್​ ಟ್ರೆವಲ್ಲೆ ಉತ್ತಮ ಮೀನಾಗಿದೆ. ಮೀನುಗಾರಿಕೆಯಲ್ಲಿ ಇದರ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿತ್ತು. ಇದೀಗ ಹೊಸ ತಂತ್ರಜ್ಞಾನದ ಮೂಲಕ ಇದರ ಸಂತಾನೋತ್ಪತ್ತಿ ಸಾಮರ್ಥ್ಯದ ಹೆಚ್ಚಳದ ಯಶಸ್ಸು, ಗಮನಾರ್ಹವಾಗಿ ಅದ್ಭುತವಾಗಿದೆ. ಇದು ಸುಸ್ಥಿರ ಮೀನು ಕೃಷಿ ಮೂಲಕ ಸಮುದ್ರದಲ್ಲಿನ ಜಲ ಕೃಷಿಗೆ ಅವಕಾಶವನ್ನು ನೀಡಲಿದೆ.

ಭಾರತದಲ್ಲಿ ಬಂಡೆಗಲ್ಲಿನ ನೀರಿನ ಪ್ರದೇಶದಲ್ಲಿ ಈ ಮೀನುಗಳನ್ನು ಕಾಣಬಹುದಾಗಿದೆ. ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ ಮತ್ತು ಗುಜರಾತ್​ನಲ್ಲಿ ಇವು ಹೆಚ್ಚು ಕಂಡುಬರುತ್ತವೆ. ಇವು ಸಿಲ್ವರ್​ ಗ್ರೇ ಬಣ್ಣದ ಜೊತೆ ಹಳದಿ ಬಣ್ಣದ ಮೀನುಗಳಾಗಿವೆ. ನೋಡಲು ಆಕರ್ಷಣಿಯವಾಗಿರುವ ಹಿನ್ನೆಲೆ ಅಕ್ವೇರಿಯಂನಲ್ಲೂ ಸಹ ಇವುಗಳನ್ನು ಇಡುತ್ತಾರೆ. ಈ ತಳಿಗಳ ಅಲಂಕಾರಿಕ ಒಂದು ಮೀನಿನ ಬೆಲೆ 150 ರಿಂದ 250 ರೂ. ಇದೆ. 2019ರಲ್ಲಿ ಈ ಮೀನಿನ ಬೀಜದ ಉತ್ಪಾದನೆ ಪ್ರಯತ್ನವನ್ನು ವಿಶಾಖಪಟ್ಟಣಂ ಪ್ರಾದೇಶಿಕ ಕೇಂದ್ರದಲ್ಲಿ ನಡೆಸಲಾಗಿತ್ತು.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

14 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago