Advertisement
MIRROR FOCUS

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ

Share

ಆಹಾರಗಳಲ್ಲಿ(Food) ಮೀನು(Fish) ಕೂಡ ಪ್ರಮುಖ ಭಾಗ ವಹಿಸುತ್ತದೆ. ಮಾಂಸಾಹಾರಿಗಳಲ್ಲಿ(Non veg) ಸಮುದ್ರಾಹಾರ(Sea-food) ಬಯಸಿ ತಿನ್ನುವವರು ಬಹುಪಾಲು ಮಂದಿ. ಮತ್ಸ್ಯೋದ್ಯಮ(Fishery) ಬೃಹತ್‌ ಉದ್ಯಮವಾಗಿ ಬೆಳೆದಿದೆ. ಆರ್ಥಿಕವಾಗಿ(Economy) ವಹಳ ದೊಡ್ಡದಾಗಿ ಬೆಳೆದಿದೆ. ಸಮುದ್ರಾಹಾರ ಬೇಡಿಕೆ ಹೆಚ್ಚಿಸುವ ಜೊತೆಗೆ ಭಾರತದ(India) ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜಿಸುವ ಉದ್ದೇಶದಿಂದ ಕೇರಳದ(Kerala) ಐಸಿಎಆರ್(ICER)​- ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ಹೊಸ ಸಾಧನೆ ಮಾಡಿದೆ. ಬೀಜ ಉತ್ಪಾದನೆ ತಂತ್ರಜ್ಞಾನದ ಅಭಿವೃದ್ಧಿ ಮೂಲಕ ಗೋಲ್ಡನ್​​ ಟ್ರೆವಲ್ಲಿ ಎಂಬ ಮೀನಿನ ಉತ್ಪಾದನೆಯನ್ನು ಯಶಸ್ವಿಯಾಗಿ ಸಿಎಂಎಫ್​ಆರ್​​ಐ ಮಾಡಿದೆ. ಈ ಅಭಿವೃದ್ಧಿಯು ಸಮುದ್ರಾಹಾರದ ಉತ್ಪಾದನೆ ಮತ್ತು ದೇಶದಲ್ಲಿ ಲಭ್ಯವಿರುವ ತಳಿಗಳ ಅಭಿವೃದ್ಧಿಗೆ ಕಾರಣವಾಗಲಿದೆ.

ವಿಶಾಖಪಟ್ಟಣಂನ ಪ್ರಾದೇಶಿಕ ಕೇಂದ್ರ ಸಿಎಂಎಫ್​ಆರ್​ಐ ವಿಜ್ಞಾನಿಗಳು ಐದು ವರ್ಷಗಳ ಅಧ್ಯಯನದ ಬಳಿಕ ಈ ಮೀನಿನ ರಕ್ತನಾಳದ ಅಭಿವೃದ್ಧಿ, ಸಂತಾನೋತ್ಪತಿ ಸಾಮರ್ಥ್ಯ ಮತ್ತು ಮೀನಿನ ಲಾರ್ವಾ ಸಾಕಾಣಿಯಲ್ಲಿ ಯಶಸ್ವಿ ಸಾಧನೆ ಮಾಡಿದ್ದಾರೆ. ಗೋಲ್ಡನ್​ ಟ್ರೆವಲ್ಲೆ ಅಥವಾ ಗೋಲ್ಡನ್​ ಕಿಂಗ್​ ಫಿಶರ್​ ತಳಿಯ ಮೀನುಗಳು ಸಮುದ್ರ ಜಲ ಕೃಷಿಗೆ ಸೂಕ್ತವಾಗಿದೆ. ಕಾರಣ ಇದು ಬೆಳವಣಿಗೆ ದರ ಮತ್ತು ಉತ್ತಮ ಮಾಂಸದ ಗುಣಮಟ್ಟ ಮತ್ತು ಸೇವನೆ ಹಾಗೂ ಅಲಂಕಾರ ಉದ್ದೇಶದಿಂದ ಇದಕ್ಕೆ ಬೇಡಿಕೆ ಹೆಚ್ಚಿದೆ. ಈ ಮೀನು ಕೆಜಿಗೆ 400 ರಿಂದ 500 ರೂ. ಮೌಲ್ಯವನ್ನು ಹೊಂದಿದೆ.

ಈ ಕುರಿತು ಮಾತನಾಡಿರುವ ಸಿಎಂಎಫ್​ಆರ್​ಐನ ನಿರ್ದೇಶಕ ಗೋಪಾಲ್​ಕೃಷ್ಣನ್​​, ಭಾರತದ ಸಮುದ್ರ ಕೃಷಿಯಲ್ಲಿ ಇದೊಂದು ಗಮನಾರ್ಹ ಮೈಲಿಗಲ್ಲು ಎಂದಿದ್ದಾರೆ. ಅಪೇಕ್ಷಿತ ಗುಣಮಟ್ಟದ ಕಾರಣದಿಂದ ಸಮುದ್ರ ಕೃಷಿಗೆ ಈ ಗೋಲ್ಡನ್​ ಟ್ರೆವಲ್ಲೆ ಉತ್ತಮ ಮೀನಾಗಿದೆ. ಮೀನುಗಾರಿಕೆಯಲ್ಲಿ ಇದರ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿತ್ತು. ಇದೀಗ ಹೊಸ ತಂತ್ರಜ್ಞಾನದ ಮೂಲಕ ಇದರ ಸಂತಾನೋತ್ಪತ್ತಿ ಸಾಮರ್ಥ್ಯದ ಹೆಚ್ಚಳದ ಯಶಸ್ಸು, ಗಮನಾರ್ಹವಾಗಿ ಅದ್ಭುತವಾಗಿದೆ. ಇದು ಸುಸ್ಥಿರ ಮೀನು ಕೃಷಿ ಮೂಲಕ ಸಮುದ್ರದಲ್ಲಿನ ಜಲ ಕೃಷಿಗೆ ಅವಕಾಶವನ್ನು ನೀಡಲಿದೆ.

ಭಾರತದಲ್ಲಿ ಬಂಡೆಗಲ್ಲಿನ ನೀರಿನ ಪ್ರದೇಶದಲ್ಲಿ ಈ ಮೀನುಗಳನ್ನು ಕಾಣಬಹುದಾಗಿದೆ. ತಮಿಳುನಾಡು, ಪುದುಚೇರಿ, ಕೇರಳ, ಕರ್ನಾಟಕ ಮತ್ತು ಗುಜರಾತ್​ನಲ್ಲಿ ಇವು ಹೆಚ್ಚು ಕಂಡುಬರುತ್ತವೆ. ಇವು ಸಿಲ್ವರ್​ ಗ್ರೇ ಬಣ್ಣದ ಜೊತೆ ಹಳದಿ ಬಣ್ಣದ ಮೀನುಗಳಾಗಿವೆ. ನೋಡಲು ಆಕರ್ಷಣಿಯವಾಗಿರುವ ಹಿನ್ನೆಲೆ ಅಕ್ವೇರಿಯಂನಲ್ಲೂ ಸಹ ಇವುಗಳನ್ನು ಇಡುತ್ತಾರೆ. ಈ ತಳಿಗಳ ಅಲಂಕಾರಿಕ ಒಂದು ಮೀನಿನ ಬೆಲೆ 150 ರಿಂದ 250 ರೂ. ಇದೆ. 2019ರಲ್ಲಿ ಈ ಮೀನಿನ ಬೀಜದ ಉತ್ಪಾದನೆ ಪ್ರಯತ್ನವನ್ನು ವಿಶಾಖಪಟ್ಟಣಂ ಪ್ರಾದೇಶಿಕ ಕೇಂದ್ರದಲ್ಲಿ ನಡೆಸಲಾಗಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago