ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…