ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…