Advertisement
MIRROR FOCUS

ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯ | ಹಲಸು-ನೇರಳೆ-ಹುಣಸೆ ಹಣ್ಣು ತಳಿಗಳ ಬಗ್ಗೆ ಸಂವಾದ |

Share

ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.

Advertisement
Advertisement

ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.

ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ,  ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

8 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

8 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

8 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

8 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

17 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

18 hours ago