ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…