Advertisement
MIRROR FOCUS

ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯ | ಹಲಸು-ನೇರಳೆ-ಹುಣಸೆ ಹಣ್ಣು ತಳಿಗಳ ಬಗ್ಗೆ ಸಂವಾದ |

Share

ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.

ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.

ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ,  ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

15 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

16 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

2 days ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

2 days ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

3 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

4 days ago