ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…