ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…