ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.
ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.
ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…