Advertisement
MIRROR FOCUS

ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ | ಈಶ್ವರ ಖಂಡ್ರ ಸೂಚನೆ

Share

ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ(Western Ghat) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.  ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ. ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿರುವ ಸಚಿವರು, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಢಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ (Zonal Regulation and Master plan on Land use pattern) ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದು, ಕೂಡಲೇ ವಿವಿಧ ಇಲಾಖೆ ಸಮನ್ವಯದೊಂದಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕ ಮಹತ್ವದ ಯೋಜನೆಗೆ ಮಾತ್ರ ಸಮ್ಮತಿ: ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

3 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

4 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

4 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago