ಬೀದಿ ಬದಿಗೆ ಬಂದ ಹೋರಿಗಳು | ವಾಹನ ಸವಾರರಿಗೂ ಸಂಕಷ್ಟ | ತೋಟದವರಿಗೂ ಕಾಟ…! |

December 29, 2023
10:30 PM
ರಸ್ತೆ ಬದಿಯಲ್ಲಿ ಹೋರಿಗಳನ್ನು ಬಿಡುವವರಿಗೆ ಎಚ್ಚರಿಕೆ ಬೇಕಿದೆ. ಗೋಮಳಗಳನ್ನೂ ಗೋವುಗಳಿಗೆ ಅನುಕೂಲ ಮಾಡಿಕೊಡಬೇಕಿದೆ.

ಗೋವು ಉಳಿಯಬೇಕು, ಆದರೆ ನಮ್ಮ ಮನೆಯಲ್ಲಿ ಅಲ್ಲ.. ಪಕ್ಕದ ಮನೆಯಲ್ಲಿ…!, ಈಗ ಅದೂ ಅಲ್ಲ, ರಸ್ತೆ ಬದಿಯಲ್ಲಿ ಎಂಬ ಹಾಗೆ ಆಗಿದೆ ಕಾಲ. ರಸ್ತೆ ಬದಿಗಳಲ್ಲಿ ಹೋರಿಗಳು ಬಂದು ಇಳಿಯುತ್ತವೆ, ಸಮೀಪದ ಮನೆಗಳಿಗೆ, ತೋಟಗಳಿಗೂ ಈಗ ಸಂಕಷ್ಟ. ವಾಹನ ಸವಾರರಿಗೂ ಕಷ್ಟ ಕಷ್ಟ..!. ಈಚೆಗೆ ಸುಳ್ಯದ ಎಲಿಮಲೆ ಬಳಿಯಲ್ಲಿ ಕೆರೆಗೆ ಹೋರಿ ಬಿದ್ದು ಸಂಕಷ್ಟ ಅನುಭವಿಸಿದೆ.

ಸುಳ್ಯದ ಹಲವು ಕಡೆಗಳಲ್ಲಿ ಹೋರಿ ಕರುಗಳಲ್ಲಿ ರಸ್ತೆ ಬದಿ, ಕಾಡಿನ ಬದಿಗಳಲ್ಲಿ , ಪೇಟೆ ಬದಿಗಳಲ್ಲಿ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈಚೆಗೆ ಎಲಿಮಲೆ ಬಳಿಯ ಚಳ್ಳ ಗೋವಿಂದ ಭಟ್ ಅವರ ತೋಟದ ಕೆರೆಯಲ್ಲಿ ಹೋರಿ ಕರುವೊಂದು ಕೆರೆಗೆ ಬಿದ್ದಿತ್ತು. ನಂತರ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಲಾಯಿತು.ಕೆಲವು ಸಮಯದ ಹಿಂದೆ ರಸ್ತೆ ಬದಿಯಲ್ಲಿದ್ದ ಹೋರಿಯೊಂದು ಗುತ್ತಿಗಾರು ಬಳಿಯ ವಳಲಂಬೆಯಲ್ಲಿ ಬ್ಯಾರೆಲ್‌ ಒಳಗೆ ತಲೆಹಾಕಿ ಒದ್ದಾಟ ನಡೆಸಿತ್ತು. ಬಳಿಕ ಅಟೋ ಚಾಲಕರು ತೆರವುಗೊಳಿಸಲು ಹರಸಾಹಸ ಪಟ್ಟಿದ್ದರು. ಕೆಲವು ಸಮಯದ ಹಿಂದೆ ಉಬರಡ್ಕದ ಬಳಿಯೂ ಹೊಳೆಯಲ್ಲಿ ಹೋರಿ ಕರು ಕೆಸರಿನಲ್ಲಿ ಹೋತು ಹೋಗಿ ಪರದಾಟ ನಡೆಸಿತ್ತು.

ಹೀಗೆ ಕೆಲವು ಹೋರಿ ಕರುಗಳನ್ನು ಅಲ್ಲಲ್ಲಿ  ಕೆಲವೊಂದು ಅನಾಮಧೇಯರು ಬಿಟ್ಟು ಹೋಗುತ್ತಿದ್ದಾರೆ. ಈ ಹೋರಿಗಳು ಸಂಧಿಗಳಲ್ಲಿ ನುಗ್ಗಿ, ತರಕಾರಿ ಹಾಗೂ ಕೃಷಿ ಕಾರ್ಯಗಳಿಗೆ ಹಾನಿ ಮಾಡುತ್ತಿದೆ. ರಸ್ತೆ ಬದಿ ವಾಹನಗಳಿಗೂ ಅಡ್ಡ ಬಂದ ದ್ವಿಚಕ್ರ ಸವಾರರಿಗೂ ಸಂಕಷ್ಟವಾಗಿದೆ. ಹೋರಿ ಸಾಕಲಾಗದೇ ರಸ್ತೆಯಲ್ಲಿ ಬಿಡುವವರ ಕಾಟ ಹೆಚ್ಚಾಗಿದೆ.

ಇದಕ್ಕಾಗಿ ಆಯಾ ಗ್ರಾಮ ಪಂಚಾಯತ್‌ ಆ ಭಾಗದ ಗೋಮಾಳವನ್ನು ಗುರುತಿಸಿ ಗೋಪಾಲಕರ ಅನುಕೂಲಕ್ಕೆ ಅನುವು ಮಾಡಿ ಕೊಡಬೇಕಾಗಿದೆ. ಕೆಲವು ಕಡೆ ಲಭ್ಯವಿರುವ 50 ಎಕರೆಯಷ್ಟು ಗೋಮಾಳ ಯಾರಿಗೂ ಉಪಕಾರಕ್ಕೆ ಇಲ್ಲದಂತಾಗಿದೆ. ರಸ್ತೆ ಬದಿ ಇರುವ ಗೋವುಗಳನ್ನು ಇಂತಹ ಗೋಮಳಗಳಲ್ಲಿ ಬಿಡಬಹುದಾಗಿದೆ. ಇದಕ್ಕಾಗಿ ಗೋಮಳಗಳ ರಕ್ಷಣೆ ಹಾಗೂ ರಸ್ತೆ ಬದಿ ಹೋರಿಗಳನ್ನು  ಬಿಡುವವರ ಸಂಖ್ಯೆಯೂ ಕಡಿಮೆ ಆಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror