MIRROR FOCUS

ಬೀದಿ ಬದಿಗೆ ಬಂದ ಹೋರಿಗಳು | ವಾಹನ ಸವಾರರಿಗೂ ಸಂಕಷ್ಟ | ತೋಟದವರಿಗೂ ಕಾಟ…! |

Share

ಗೋವು ಉಳಿಯಬೇಕು, ಆದರೆ ನಮ್ಮ ಮನೆಯಲ್ಲಿ ಅಲ್ಲ.. ಪಕ್ಕದ ಮನೆಯಲ್ಲಿ…!, ಈಗ ಅದೂ ಅಲ್ಲ, ರಸ್ತೆ ಬದಿಯಲ್ಲಿ ಎಂಬ ಹಾಗೆ ಆಗಿದೆ ಕಾಲ. ರಸ್ತೆ ಬದಿಗಳಲ್ಲಿ ಹೋರಿಗಳು ಬಂದು ಇಳಿಯುತ್ತವೆ, ಸಮೀಪದ ಮನೆಗಳಿಗೆ, ತೋಟಗಳಿಗೂ ಈಗ ಸಂಕಷ್ಟ. ವಾಹನ ಸವಾರರಿಗೂ ಕಷ್ಟ ಕಷ್ಟ..!. ಈಚೆಗೆ ಸುಳ್ಯದ ಎಲಿಮಲೆ ಬಳಿಯಲ್ಲಿ ಕೆರೆಗೆ ಹೋರಿ ಬಿದ್ದು ಸಂಕಷ್ಟ ಅನುಭವಿಸಿದೆ.

Advertisement
Advertisement

ಸುಳ್ಯದ ಹಲವು ಕಡೆಗಳಲ್ಲಿ ಹೋರಿ ಕರುಗಳಲ್ಲಿ ರಸ್ತೆ ಬದಿ, ಕಾಡಿನ ಬದಿಗಳಲ್ಲಿ , ಪೇಟೆ ಬದಿಗಳಲ್ಲಿ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈಚೆಗೆ ಎಲಿಮಲೆ ಬಳಿಯ ಚಳ್ಳ ಗೋವಿಂದ ಭಟ್ ಅವರ ತೋಟದ ಕೆರೆಯಲ್ಲಿ ಹೋರಿ ಕರುವೊಂದು ಕೆರೆಗೆ ಬಿದ್ದಿತ್ತು. ನಂತರ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಲಾಯಿತು.ಕೆಲವು ಸಮಯದ ಹಿಂದೆ ರಸ್ತೆ ಬದಿಯಲ್ಲಿದ್ದ ಹೋರಿಯೊಂದು ಗುತ್ತಿಗಾರು ಬಳಿಯ ವಳಲಂಬೆಯಲ್ಲಿ ಬ್ಯಾರೆಲ್‌ ಒಳಗೆ ತಲೆಹಾಕಿ ಒದ್ದಾಟ ನಡೆಸಿತ್ತು. ಬಳಿಕ ಅಟೋ ಚಾಲಕರು ತೆರವುಗೊಳಿಸಲು ಹರಸಾಹಸ ಪಟ್ಟಿದ್ದರು. ಕೆಲವು ಸಮಯದ ಹಿಂದೆ ಉಬರಡ್ಕದ ಬಳಿಯೂ ಹೊಳೆಯಲ್ಲಿ ಹೋರಿ ಕರು ಕೆಸರಿನಲ್ಲಿ ಹೋತು ಹೋಗಿ ಪರದಾಟ ನಡೆಸಿತ್ತು.

ಹೀಗೆ ಕೆಲವು ಹೋರಿ ಕರುಗಳನ್ನು ಅಲ್ಲಲ್ಲಿ  ಕೆಲವೊಂದು ಅನಾಮಧೇಯರು ಬಿಟ್ಟು ಹೋಗುತ್ತಿದ್ದಾರೆ. ಈ ಹೋರಿಗಳು ಸಂಧಿಗಳಲ್ಲಿ ನುಗ್ಗಿ, ತರಕಾರಿ ಹಾಗೂ ಕೃಷಿ ಕಾರ್ಯಗಳಿಗೆ ಹಾನಿ ಮಾಡುತ್ತಿದೆ. ರಸ್ತೆ ಬದಿ ವಾಹನಗಳಿಗೂ ಅಡ್ಡ ಬಂದ ದ್ವಿಚಕ್ರ ಸವಾರರಿಗೂ ಸಂಕಷ್ಟವಾಗಿದೆ. ಹೋರಿ ಸಾಕಲಾಗದೇ ರಸ್ತೆಯಲ್ಲಿ ಬಿಡುವವರ ಕಾಟ ಹೆಚ್ಚಾಗಿದೆ.

ಇದಕ್ಕಾಗಿ ಆಯಾ ಗ್ರಾಮ ಪಂಚಾಯತ್‌ ಆ ಭಾಗದ ಗೋಮಾಳವನ್ನು ಗುರುತಿಸಿ ಗೋಪಾಲಕರ ಅನುಕೂಲಕ್ಕೆ ಅನುವು ಮಾಡಿ ಕೊಡಬೇಕಾಗಿದೆ. ಕೆಲವು ಕಡೆ ಲಭ್ಯವಿರುವ 50 ಎಕರೆಯಷ್ಟು ಗೋಮಾಳ ಯಾರಿಗೂ ಉಪಕಾರಕ್ಕೆ ಇಲ್ಲದಂತಾಗಿದೆ. ರಸ್ತೆ ಬದಿ ಇರುವ ಗೋವುಗಳನ್ನು ಇಂತಹ ಗೋಮಳಗಳಲ್ಲಿ ಬಿಡಬಹುದಾಗಿದೆ. ಇದಕ್ಕಾಗಿ ಗೋಮಳಗಳ ರಕ್ಷಣೆ ಹಾಗೂ ರಸ್ತೆ ಬದಿ ಹೋರಿಗಳನ್ನು  ಬಿಡುವವರ ಸಂಖ್ಯೆಯೂ ಕಡಿಮೆ ಆಗಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

6 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

24 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago