ಗೋವು ಉಳಿಯಬೇಕು, ಆದರೆ ನಮ್ಮ ಮನೆಯಲ್ಲಿ ಅಲ್ಲ.. ಪಕ್ಕದ ಮನೆಯಲ್ಲಿ…!, ಈಗ ಅದೂ ಅಲ್ಲ, ರಸ್ತೆ ಬದಿಯಲ್ಲಿ ಎಂಬ ಹಾಗೆ ಆಗಿದೆ ಕಾಲ. ರಸ್ತೆ ಬದಿಗಳಲ್ಲಿ ಹೋರಿಗಳು ಬಂದು ಇಳಿಯುತ್ತವೆ, ಸಮೀಪದ ಮನೆಗಳಿಗೆ, ತೋಟಗಳಿಗೂ ಈಗ ಸಂಕಷ್ಟ. ವಾಹನ ಸವಾರರಿಗೂ ಕಷ್ಟ ಕಷ್ಟ..!. ಈಚೆಗೆ ಸುಳ್ಯದ ಎಲಿಮಲೆ ಬಳಿಯಲ್ಲಿ ಕೆರೆಗೆ ಹೋರಿ ಬಿದ್ದು ಸಂಕಷ್ಟ ಅನುಭವಿಸಿದೆ.
ಸುಳ್ಯದ ಹಲವು ಕಡೆಗಳಲ್ಲಿ ಹೋರಿ ಕರುಗಳಲ್ಲಿ ರಸ್ತೆ ಬದಿ, ಕಾಡಿನ ಬದಿಗಳಲ್ಲಿ , ಪೇಟೆ ಬದಿಗಳಲ್ಲಿ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈಚೆಗೆ ಎಲಿಮಲೆ ಬಳಿಯ ಚಳ್ಳ ಗೋವಿಂದ ಭಟ್ ಅವರ ತೋಟದ ಕೆರೆಯಲ್ಲಿ ಹೋರಿ ಕರುವೊಂದು ಕೆರೆಗೆ ಬಿದ್ದಿತ್ತು. ನಂತರ ಸ್ಥಳೀಯರ ಸಹಕಾರದಿಂದ ಮೇಲಕ್ಕೆತ್ತಲಾಯಿತು.ಕೆಲವು ಸಮಯದ ಹಿಂದೆ ರಸ್ತೆ ಬದಿಯಲ್ಲಿದ್ದ ಹೋರಿಯೊಂದು ಗುತ್ತಿಗಾರು ಬಳಿಯ ವಳಲಂಬೆಯಲ್ಲಿ ಬ್ಯಾರೆಲ್ ಒಳಗೆ ತಲೆಹಾಕಿ ಒದ್ದಾಟ ನಡೆಸಿತ್ತು. ಬಳಿಕ ಅಟೋ ಚಾಲಕರು ತೆರವುಗೊಳಿಸಲು ಹರಸಾಹಸ ಪಟ್ಟಿದ್ದರು. ಕೆಲವು ಸಮಯದ ಹಿಂದೆ ಉಬರಡ್ಕದ ಬಳಿಯೂ ಹೊಳೆಯಲ್ಲಿ ಹೋರಿ ಕರು ಕೆಸರಿನಲ್ಲಿ ಹೋತು ಹೋಗಿ ಪರದಾಟ ನಡೆಸಿತ್ತು.
ಹೀಗೆ ಕೆಲವು ಹೋರಿ ಕರುಗಳನ್ನು ಅಲ್ಲಲ್ಲಿ ಕೆಲವೊಂದು ಅನಾಮಧೇಯರು ಬಿಟ್ಟು ಹೋಗುತ್ತಿದ್ದಾರೆ. ಈ ಹೋರಿಗಳು ಸಂಧಿಗಳಲ್ಲಿ ನುಗ್ಗಿ, ತರಕಾರಿ ಹಾಗೂ ಕೃಷಿ ಕಾರ್ಯಗಳಿಗೆ ಹಾನಿ ಮಾಡುತ್ತಿದೆ. ರಸ್ತೆ ಬದಿ ವಾಹನಗಳಿಗೂ ಅಡ್ಡ ಬಂದ ದ್ವಿಚಕ್ರ ಸವಾರರಿಗೂ ಸಂಕಷ್ಟವಾಗಿದೆ. ಹೋರಿ ಸಾಕಲಾಗದೇ ರಸ್ತೆಯಲ್ಲಿ ಬಿಡುವವರ ಕಾಟ ಹೆಚ್ಚಾಗಿದೆ.
ಇದಕ್ಕಾಗಿ ಆಯಾ ಗ್ರಾಮ ಪಂಚಾಯತ್ ಆ ಭಾಗದ ಗೋಮಾಳವನ್ನು ಗುರುತಿಸಿ ಗೋಪಾಲಕರ ಅನುಕೂಲಕ್ಕೆ ಅನುವು ಮಾಡಿ ಕೊಡಬೇಕಾಗಿದೆ. ಕೆಲವು ಕಡೆ ಲಭ್ಯವಿರುವ 50 ಎಕರೆಯಷ್ಟು ಗೋಮಾಳ ಯಾರಿಗೂ ಉಪಕಾರಕ್ಕೆ ಇಲ್ಲದಂತಾಗಿದೆ. ರಸ್ತೆ ಬದಿ ಇರುವ ಗೋವುಗಳನ್ನು ಇಂತಹ ಗೋಮಳಗಳಲ್ಲಿ ಬಿಡಬಹುದಾಗಿದೆ. ಇದಕ್ಕಾಗಿ ಗೋಮಳಗಳ ರಕ್ಷಣೆ ಹಾಗೂ ರಸ್ತೆ ಬದಿ ಹೋರಿಗಳನ್ನು ಬಿಡುವವರ ಸಂಖ್ಯೆಯೂ ಕಡಿಮೆ ಆಗಬೇಕಿದೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…