Advertisement
ರಾಜ್ಯ

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

Share

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೈತರು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಧರಣಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಲೆನಾಡಿನಲ್ಲಿ ಸಣ್ಣ ರೈತರು ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಅವರನ್ನು ಏಕಾಏಕಿ ಒಕ್ಕಲೆಬ್ಬಿಸುವುದು ಸರಿಯಲ್ಲ. ಸರ್ಕಾರ ರೈತರ ಮನವಿಯನ್ನು ಆಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹರತಾಳು ಹಾಲಪ್ಪ ಮಾತನಾಡಿ, ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾದರೆ ಕಾಗೋಡು ಚಳವಳಿಯಂತೆ ಮತ್ತೊಂದು ಹೋರಾಟ ಆರಂಭಿಸುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ  ದಿನೇಶ್ ಶಿರವಾಳ, ಐವತ್ತು ಅರವತ್ತು ವರ್ಷಗಳಿಂದ ಅರಣ್ಯವಾಸಿಗಳು ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಿ ಹಕ್ಕು ಪತ್ರ ನೀಡಬೇಕು ಎಂದು ಮನವಿ ಮಾಡಿದರು.

ಧರಣಿ ಸತ್ಯಾಗ್ರಹ ಸ್ಥಳಕ್ಕೆ  ಭೇಟಿ ನೀಡಿದ ಸಂಸದ ಬಿ ವೈ ರಾಘವೇಂದ್ರ,  ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಿದರು. ಮುಳುಗಡೆ ಸಂತ್ರಸ್ತರಿಗೆ ಅವರ ಬೇಡಿಕೆಗಳಿಗೆ ಅನುಗುಣವಾಗಿ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

8 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

19 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

20 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

23 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago