ಅಡಿಕೆ ಆಮದು ರದ್ದುಗೊಳಿಸಲು ಒತ್ತಾಯ | ಅ.14 ರಂದು ಶಿವಮೊಗ್ಗದಲ್ಲಿ ಬೆಳೆಗಾರರಿಂದ ಪ್ರತಿಭಟನೆ |

October 11, 2022
3:31 PM

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಎಚ್.ಆರ್. ಬಸವರಾಜಪ್ಪ, ಭೂತಾನ್‌ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಯಾವುದೇ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್‌ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ  ಇದಕ್ಕಾಗಿ ತಕ್ಷಣವೇ ಅಡಿಕೆ ಆಮದು ರದ್ದಾಗಬೇಕು ಎಂದರು. ಆಮದು ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260 ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಭಾರತ ದೇಶದಲ್ಲಿ ವಾರ್ಷಿಕವಾಗಿ 8 ರಿಂದ 10ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಈ ಪ್ರಮಾಣದ ಉತ್ಪಾದನೆಯಿಂದ ಸ್ಥಳೀಯ ಬೇಡಿಕೆ ಪೂರೈಕೆ ಜೊತೆಗೆ ರಫ್ತು ಕೂಡ ಮಾಡಬಹುದು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗಿದ್ದು ಇನ್ನು 4-5ವರ್ಷಗಳಲ್ಲಿ ದೇಶದಲ್ಲಿ 15ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದರು. ಹೀಗಾಗಿ ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror