ಅಡಿಕೆ ಆಮದು ರದ್ದುಗೊಳಿಸಲು ಒತ್ತಾಯ | ಅ.14 ರಂದು ಶಿವಮೊಗ್ಗದಲ್ಲಿ ಬೆಳೆಗಾರರಿಂದ ಪ್ರತಿಭಟನೆ |

October 11, 2022
3:31 PM

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

Advertisement
Advertisement
Advertisement

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಎಚ್.ಆರ್. ಬಸವರಾಜಪ್ಪ, ಭೂತಾನ್‌ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಯಾವುದೇ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್‌ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ  ಇದಕ್ಕಾಗಿ ತಕ್ಷಣವೇ ಅಡಿಕೆ ಆಮದು ರದ್ದಾಗಬೇಕು ಎಂದರು. ಆಮದು ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

Advertisement

ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260 ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಭಾರತ ದೇಶದಲ್ಲಿ ವಾರ್ಷಿಕವಾಗಿ 8 ರಿಂದ 10ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಈ ಪ್ರಮಾಣದ ಉತ್ಪಾದನೆಯಿಂದ ಸ್ಥಳೀಯ ಬೇಡಿಕೆ ಪೂರೈಕೆ ಜೊತೆಗೆ ರಫ್ತು ಕೂಡ ಮಾಡಬಹುದು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗಿದ್ದು ಇನ್ನು 4-5ವರ್ಷಗಳಲ್ಲಿ ದೇಶದಲ್ಲಿ 15ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದರು. ಹೀಗಾಗಿ ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror