Advertisement
ರಾಜ್ಯ

ಅಡಿಕೆ ಆಮದು ರದ್ದುಗೊಳಿಸಲು ಒತ್ತಾಯ | ಅ.14 ರಂದು ಶಿವಮೊಗ್ಗದಲ್ಲಿ ಬೆಳೆಗಾರರಿಂದ ಪ್ರತಿಭಟನೆ |

Share

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಎಚ್.ಆರ್. ಬಸವರಾಜಪ್ಪ, ಭೂತಾನ್‌ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಯಾವುದೇ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್‌ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ  ಇದಕ್ಕಾಗಿ ತಕ್ಷಣವೇ ಅಡಿಕೆ ಆಮದು ರದ್ದಾಗಬೇಕು ಎಂದರು. ಆಮದು ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260 ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಭಾರತ ದೇಶದಲ್ಲಿ ವಾರ್ಷಿಕವಾಗಿ 8 ರಿಂದ 10ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಈ ಪ್ರಮಾಣದ ಉತ್ಪಾದನೆಯಿಂದ ಸ್ಥಳೀಯ ಬೇಡಿಕೆ ಪೂರೈಕೆ ಜೊತೆಗೆ ರಫ್ತು ಕೂಡ ಮಾಡಬಹುದು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗಿದ್ದು ಇನ್ನು 4-5ವರ್ಷಗಳಲ್ಲಿ ದೇಶದಲ್ಲಿ 15ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದರು. ಹೀಗಾಗಿ ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

10 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago