ಸುದ್ದಿಗಳು

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

Share

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

20 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago