Advertisement
ಸುದ್ದಿಗಳು

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

Share

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago