Advertisement
ಸುದ್ದಿಗಳು

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

Share

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

10 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

11 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

12 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

12 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

12 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

16 hours ago