Advertisement
ಸುದ್ದಿಗಳು

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

Share

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

Advertisement

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

15 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

23 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

23 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

23 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

23 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago