Advertisement
ಸುದ್ದಿಗಳು

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

Share

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

7 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

8 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

18 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago