ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅತ್ಯಾಚಾರ ಆರೋಪದ ಶಿಕ್ಷಕನ ವಿರುದ್ಧ ಆಕ್ರೋಶ | ಸಮಗ್ರ ತನಿಖೆಗೆ ಒತ್ತಾಯ |

August 11, 2021
11:01 AM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಪದವಿಪೂರ್ವ ಕಾಲೇಜಿನಲ್ಲಿ ಹೈಸ್ಕೂಲ್‌ ವಿಭಾಗದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್‌ ವಿರುದ್ಧ  ಕಾಲೇಜು ವಠಾರದಲ್ಲಿ ಸಾರ್ವಜನಿಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ಯಾಚಾರ ಆರೋಪದ ಶಿಕ್ಷಕನ ವಜಾ ಮಾಡಬೇಕು ಹಾಗೂ ಆತನ ಮೊದಲನೇ ಮದುವೆಯಾದಲ್ಲಿಂದಲೇ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಶಿಕ್ಷಕ ಗುರುರಾಜ್‌ ವಿದ್ಯಾರ್ಥಿನಿಯೊಬ್ಬಳನ್ನು ಪ್ರಾಜೆಕ್ಟ್‌ ಕೆಲಸ ಹಾಗೂ ಟ್ಯೂಷನ್‌ ನೆಪದಲ್ಲಿ  ಮನೆಗೆ ಕರೆಯಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಅತ್ಯಾಚಾರ ಮಾಡಿದ ಬಗ್ಗೆ ವಿದ್ಯಾರ್ಥನಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ  ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.  ಗುರುರಾಜ್‌ ವಿಕೃತಕಾಮಿ ಎಂಬುದು ಪೊಲೀಸ್‌ ತನಿಖೆ ವೇಳೆ ಬಯಲಾಗಿತ್ತು. ಹೀಗಾಗಿ ಫೋಕ್ಸೋ ಕಾಯಿದೆಯನ್ವಯ ಅಪ್ತಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿದ ಬಗ್ಗೆ ಕೇಸು ದಾಖಲಾಗಿತ್ತು. ಆರೋಪಿ ಶಿಕ್ಷಕ ಗುರುರಾಜ್‌ ಮೊದಲ ಪತ್ನಿ ಮೃತಪಟ್ಟಿದ್ದು ಎರಡನೇ ಮದುವೆಯಾಗಿದೆ. ಹೀಗಾಗಿ ಮೊದಲನೇ ಪತ್ನಿ ಮೃತಪಟ್ಟಲ್ಲಿಂದಲೇ ತನಿಖೆಯಾಗಬೇಕು, ಈ ಶಿಕ್ಷಕನಿಗೆ ಇಂತಹದ್ದೇ ಕೃತ್ಯ ಇರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ಈತನಿಗೆ ಬೆಂಬಲ ನೀಡುವ ಇನ್ನೂ ಕೆಲವರು  ಇರುವ ಅನುಮಾನವೂ ಇದ್ದು ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror