ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…