ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…