Advertisement
ಸುದ್ದಿಗಳು

ಸೌಜನ್ಯ ಪ್ರಕರಣ | ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಕೊಲೆ ಪ್ರಕರಣದ ನೈಜ ಆರೋಪಿ ಬಂಧನಕ್ಕೆ ಒತ್ತಾಯ |

Share

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.

ಪುತ್ತೂರಿನ ದರ್ಬೆ ವೃತ್ತದಿಂದ ಪಾದಯಾತ್ರೆಯ ಮೂಲಕ ತೆರಳಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು  ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು ಎಂದರು.

ಸರಕಾರವು ಸೌಜನ್ಯ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಈ ಪ್ರಕರಣದ ಲಾಭ ಪಡೆಯಲು ಯತ್ನಿಸಿದರೆ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಸಿದರು. ಸೌಜನ್ಯ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಆಂದೋಲನ ಮುಂದಿನ ದಿನಗಳಲ್ಲಿ ಸಂಘರ್ಷವಾಗುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕೆಂದ ಅವರು ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿದ್ದ ಪೋಲೀಸ್ ಅಧಿಕಾರಿಗಳಾದ ಅಭಿಷೇಕ್ ಗೋಯಲ್, ಸುದರ್ಶನ್ ಮತ್ತು ಯೋಗೀಶ್ ಎನ್ನುವ ಅಧಿಕಾರಿಗಳನ್ನು ಸರಕಾರ ಎಸ್.ಐ.ಟಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಇವರ ತನಿಖೆಯಿಂದ ಸೌಜನ್ಯಳ ಕೊಲೆಯ ಎಲ್ಲಾ ಮಾಹಿತಿಗಳು ಹೊರಗೆ ಬರಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

20 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

21 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago