ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.
ಪುತ್ತೂರಿನ ದರ್ಬೆ ವೃತ್ತದಿಂದ ಪಾದಯಾತ್ರೆಯ ಮೂಲಕ ತೆರಳಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು ಎಂದರು.
ಸರಕಾರವು ಸೌಜನ್ಯ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಈ ಪ್ರಕರಣದ ಲಾಭ ಪಡೆಯಲು ಯತ್ನಿಸಿದರೆ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಸಿದರು. ಸೌಜನ್ಯ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಆಂದೋಲನ ಮುಂದಿನ ದಿನಗಳಲ್ಲಿ ಸಂಘರ್ಷವಾಗುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕೆಂದ ಅವರು ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿದ್ದ ಪೋಲೀಸ್ ಅಧಿಕಾರಿಗಳಾದ ಅಭಿಷೇಕ್ ಗೋಯಲ್, ಸುದರ್ಶನ್ ಮತ್ತು ಯೋಗೀಶ್ ಎನ್ನುವ ಅಧಿಕಾರಿಗಳನ್ನು ಸರಕಾರ ಎಸ್.ಐ.ಟಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಇವರ ತನಿಖೆಯಿಂದ ಸೌಜನ್ಯಳ ಕೊಲೆಯ ಎಲ್ಲಾ ಮಾಹಿತಿಗಳು ಹೊರಗೆ ಬರಲಿದೆ ಎಂದರು.
ಹರಳು ಹಿಂಡಿಯು(Castro cake), ಹರಳು ಬೀಜಗಳಿಂದ(Castro seed) ಎಣ್ಣೆ ಅನ್ನು ಹೊರತೆಗೆಯುವುದರಿಂದ ಪಡೆದ…
ಇತ್ತೀಚಿನ ದಿನಗಳಲ್ಲಿ ಸಂಬಂಧಗಳ ಬೆಲೆ(Relationship), ಆತ್ಮೀಯತೆ, ಪ್ರೀತಿ(Love), ಕಾಳಜಿ(Care) ದಿನೇ ದಿನೇ ಕುಸಿಯುತ್ತಿದೆ.…
ದಕ್ಷಿಣ ಭಾರತದಲ್ಲಿ(South India) ಪೂರ್ವ ಮುಂಗಾರು ಮಳೆಯಿಂದ(Pre Mansoon rain) ತಕ್ಕ ಮಟ್ಟಿಗೆ…
ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ…
ಮುಂಗಾರು ಪ್ರವೇಶವಾಗುತ್ತಿದ್ದಂತೆಯೇ ಮೀನುಗಾರಿಕೆ ಸ್ಥಗಿತವಾಗುತ್ತದೆ. ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ತೊಡಗುತ್ತಾರೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.