Advertisement
ಸುದ್ದಿಗಳು

ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನೈತಿಕ ಪೊಲೀಸ್‌ಗಿರಿಗೆ ಖಂಡನೆ | ಅ.29 ರಂದು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ -ಟಿ.ಎಂ.ಶಹೀದ್ ತೆಕ್ಕಿಲ್

Share

ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳಾಗುತ್ತಿದೆ. ಇದಕ್ಕೆ ಸರ್ಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು ಸುಳ್ಯ ತಾಲೂಕು ಕಚೇರಿ ಎದುರು ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜಾತ್ಯತೀತ ನಾಯಕರನ್ನು ಸೇರಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಕಡಬದ ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಘಟನೆ ಖಂಡನೀಯ. ಅವರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಇದೆ. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ ಎಂದರು. ಎರಡು ಧರ್ಮಗಳಲ್ಲಿ ಕೆಲವು ಕಿಡಿಗೇಡಿಗಳಿದ್ದಾರೆ. ಸಮಾಜದ ಸ್ವಾಸ್ತ್ಯ ಕೆಡವುತ್ತಿದ್ದಾರೆ. ಸರ್ಕಾರ ಕೂಡ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಹತ್ಯೆಯಾದ ಅಲ್ಪಸಂಖ್ಯಾತ ಸಮುದಾಯದವರಿಗೆ ಪರಿಹಾರ ನೀಡಿಲ್ಲ. ಮಾನವ ಧರ್ಮ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಪ್ರಾಶಸ್ಯ ಕಸಿಯುತ್ತಿದೆ. ಅಲ್ಪಸಂಖ್ಯಾತ ಸಮುದಾಯದ ಸರ್ಕಾರಿ ಉದ್ಯೋಗದ ಮೀಸಲಾತಿ ಮತ್ತು ರಾಜಕೀಯ ಮೀಸಲಾತಿ ಕಡಿತ ಮಾಡಲು  ಹೊರಟಿದೆ. ಇದರ ವಿರುದ್ದವು ಹೋರಾಟ ಮಾಡಲಾಗುವುದು ಎಂದರು. ರಾಜಕೀಯದಲ್ಲಿ ಮತ ಪಡೆಯುವ ಹುನ್ನಾರ ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಯಾಕೆ ಈ ರೀತಿ ವಿಭಜನೆ ಆಗುತ್ತಿದೆ ಮತ್ತು ಇದಕ್ಕೆ ಏನು ಪರಿಹಾರ ಎಂಬ ಬಗ್ಗೆ ಹೈಕೋರ್ಟಿನ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ಅಗತ್ಯವಿದೆ ಮತ್ತು ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಅಲ್ಪ ಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿ ಸಂಪಾಜೆ ಗ್ರಾ.ಪಂ. ಸದಸ್ಯ ಅಬ್ಬುಶಾಲಿ ಗೂನಡ್ಕ , ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ , ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷ ಹನೀಫ್ ಬೀಜಕೊಚ್ಚಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

10 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

10 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

10 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

11 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago