ಅಡಿಕೆ ಅಮದು ಖಂಡಿಸಿ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

October 3, 2022
8:30 AM

ಕೇಂದ್ರ ಸರ್ಕಾರ ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳಲು ಹೊರಟಿರುವ ಕ್ರಮವನ್ನು ಖಂಡಿಸಿ ಹಿರಿಯೂರು ತಾಲೂಕಿನ ಕಸವನಹಳ್ಳಿಯಲ್ಲಿ ಅಡಿಕೆ ಬೆಳೆಗಾರರು  ಅಡಿಕೆ ಗೊಂಚಲುಗಳನ್ನು ರಾಶಿ ಹಾಕಿ ಕೇಂದ್ರದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಭೂತಾನ್‌ನಿಂದ ತೆರಿಗೆ ವಿಧಿಸದೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದುರದೃಷ್ಟಕರ. ಕೊಳವೆಬಾವಿಯಲ್ಲಿ ಸಿಗುತ್ತಿದ್ದ ಅಲ್ಪಸ್ವಲ್ಪ ನೀರು ಬಳಸಿ ಕಷ್ಟಪಟ್ಟು ಅಡಿಕೆ ತೋಟ ಬೆಳೆಸಿದ್ದೇವೆ.
ತೋಟಗಳ ನಿರ್ವಹಣಾ ವೆಚ್ಚ ಐದಾರು ಪಟ್ಟು ಹೆಚ್ಚಿದೆ. ಧಾರಣೆ ಹೆಚ್ಚಿರುವ ಕಾರಣ ಅಡಿಕೆ ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ. ಇಂತಹ ಸ್ಥಿತಿಯಲ್ಲಿ ಹೊರ ದೇಶಗಳಿಂದ ಅಡಿಕೆ ತರಿಸಿಕೊಂಡಲ್ಲಿ ಧಾರಣೆ ಕುಸಿದು ಬೆಳೆಗಾರರು ಬೀದಿಗೆ ಬೀಳಬೇಕಾಗುತ್ತದೆ’ ಎಂದು ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.

‘ಒಮ್ಮೆ ಅಡಿಕೆ ಸಸಿ ನಾಟಿ ಮಾಡಿದರೆ ಫಸಲು ಪಡೆಯಲು ಎಂಟು ವರ್ಷ ಕಾಯಬೇಕು. ನಂತರವೂ ಕೊಳೆರೋಗ ಕಾಣಿಸಿಕೊಂಡರೆ ಬೆಳೆ ಕೈಗೆ ಬರುವ ಖಚಿತತೆ ಇಲ್ಲ. ಅಡಿಕೆಗೆ ನೀರು ಕಡಿಮೆಯಾದರೂ ಕಷ್ಟ. ಹೆಚ್ಚಾದರೂ ಕಷ್ಟ. ಕೇಂದ್ರ ಸರ್ಕಾರ ಆಮದು ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror