ಕೇಂದ್ರ ಸರ್ಕಾರ ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳಲು ಹೊರಟಿರುವ ಕ್ರಮವನ್ನು ಖಂಡಿಸಿ ಹಿರಿಯೂರು ತಾಲೂಕಿನ ಕಸವನಹಳ್ಳಿಯಲ್ಲಿ ಅಡಿಕೆ ಬೆಳೆಗಾರರು ಅಡಿಕೆ ಗೊಂಚಲುಗಳನ್ನು ರಾಶಿ ಹಾಕಿ ಕೇಂದ್ರದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಭೂತಾನ್ನಿಂದ ತೆರಿಗೆ ವಿಧಿಸದೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದುರದೃಷ್ಟಕರ. ಕೊಳವೆಬಾವಿಯಲ್ಲಿ ಸಿಗುತ್ತಿದ್ದ ಅಲ್ಪಸ್ವಲ್ಪ ನೀರು ಬಳಸಿ ಕಷ್ಟಪಟ್ಟು ಅಡಿಕೆ ತೋಟ ಬೆಳೆಸಿದ್ದೇವೆ.
ತೋಟಗಳ ನಿರ್ವಹಣಾ ವೆಚ್ಚ ಐದಾರು ಪಟ್ಟು ಹೆಚ್ಚಿದೆ. ಧಾರಣೆ ಹೆಚ್ಚಿರುವ ಕಾರಣ ಅಡಿಕೆ ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ. ಇಂತಹ ಸ್ಥಿತಿಯಲ್ಲಿ ಹೊರ ದೇಶಗಳಿಂದ ಅಡಿಕೆ ತರಿಸಿಕೊಂಡಲ್ಲಿ ಧಾರಣೆ ಕುಸಿದು ಬೆಳೆಗಾರರು ಬೀದಿಗೆ ಬೀಳಬೇಕಾಗುತ್ತದೆ’ ಎಂದು ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.
‘ಒಮ್ಮೆ ಅಡಿಕೆ ಸಸಿ ನಾಟಿ ಮಾಡಿದರೆ ಫಸಲು ಪಡೆಯಲು ಎಂಟು ವರ್ಷ ಕಾಯಬೇಕು. ನಂತರವೂ ಕೊಳೆರೋಗ ಕಾಣಿಸಿಕೊಂಡರೆ ಬೆಳೆ ಕೈಗೆ ಬರುವ ಖಚಿತತೆ ಇಲ್ಲ. ಅಡಿಕೆಗೆ ನೀರು ಕಡಿಮೆಯಾದರೂ ಕಷ್ಟ. ಹೆಚ್ಚಾದರೂ ಕಷ್ಟ. ಕೇಂದ್ರ ಸರ್ಕಾರ ಆಮದು ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…