ಕೇಂದ್ರ ಸರ್ಕಾರ ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳಲು ಹೊರಟಿರುವ ಕ್ರಮವನ್ನು ಖಂಡಿಸಿ ಹಿರಿಯೂರು ತಾಲೂಕಿನ ಕಸವನಹಳ್ಳಿಯಲ್ಲಿ ಅಡಿಕೆ ಬೆಳೆಗಾರರು ಅಡಿಕೆ ಗೊಂಚಲುಗಳನ್ನು ರಾಶಿ ಹಾಕಿ ಕೇಂದ್ರದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಭೂತಾನ್ನಿಂದ ತೆರಿಗೆ ವಿಧಿಸದೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದುರದೃಷ್ಟಕರ. ಕೊಳವೆಬಾವಿಯಲ್ಲಿ ಸಿಗುತ್ತಿದ್ದ ಅಲ್ಪಸ್ವಲ್ಪ ನೀರು ಬಳಸಿ ಕಷ್ಟಪಟ್ಟು ಅಡಿಕೆ ತೋಟ ಬೆಳೆಸಿದ್ದೇವೆ.
ತೋಟಗಳ ನಿರ್ವಹಣಾ ವೆಚ್ಚ ಐದಾರು ಪಟ್ಟು ಹೆಚ್ಚಿದೆ. ಧಾರಣೆ ಹೆಚ್ಚಿರುವ ಕಾರಣ ಅಡಿಕೆ ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ. ಇಂತಹ ಸ್ಥಿತಿಯಲ್ಲಿ ಹೊರ ದೇಶಗಳಿಂದ ಅಡಿಕೆ ತರಿಸಿಕೊಂಡಲ್ಲಿ ಧಾರಣೆ ಕುಸಿದು ಬೆಳೆಗಾರರು ಬೀದಿಗೆ ಬೀಳಬೇಕಾಗುತ್ತದೆ’ ಎಂದು ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.
‘ಒಮ್ಮೆ ಅಡಿಕೆ ಸಸಿ ನಾಟಿ ಮಾಡಿದರೆ ಫಸಲು ಪಡೆಯಲು ಎಂಟು ವರ್ಷ ಕಾಯಬೇಕು. ನಂತರವೂ ಕೊಳೆರೋಗ ಕಾಣಿಸಿಕೊಂಡರೆ ಬೆಳೆ ಕೈಗೆ ಬರುವ ಖಚಿತತೆ ಇಲ್ಲ. ಅಡಿಕೆಗೆ ನೀರು ಕಡಿಮೆಯಾದರೂ ಕಷ್ಟ. ಹೆಚ್ಚಾದರೂ ಕಷ್ಟ. ಕೇಂದ್ರ ಸರ್ಕಾರ ಆಮದು ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…