Advertisement
ಕೃಷಿ

ಅಡಿಕೆ ಅಮದು ಖಂಡಿಸಿ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

Share

ಕೇಂದ್ರ ಸರ್ಕಾರ ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳಲು ಹೊರಟಿರುವ ಕ್ರಮವನ್ನು ಖಂಡಿಸಿ ಹಿರಿಯೂರು ತಾಲೂಕಿನ ಕಸವನಹಳ್ಳಿಯಲ್ಲಿ ಅಡಿಕೆ ಬೆಳೆಗಾರರು  ಅಡಿಕೆ ಗೊಂಚಲುಗಳನ್ನು ರಾಶಿ ಹಾಕಿ ಕೇಂದ್ರದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಭೂತಾನ್‌ನಿಂದ ತೆರಿಗೆ ವಿಧಿಸದೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದುರದೃಷ್ಟಕರ. ಕೊಳವೆಬಾವಿಯಲ್ಲಿ ಸಿಗುತ್ತಿದ್ದ ಅಲ್ಪಸ್ವಲ್ಪ ನೀರು ಬಳಸಿ ಕಷ್ಟಪಟ್ಟು ಅಡಿಕೆ ತೋಟ ಬೆಳೆಸಿದ್ದೇವೆ.
ತೋಟಗಳ ನಿರ್ವಹಣಾ ವೆಚ್ಚ ಐದಾರು ಪಟ್ಟು ಹೆಚ್ಚಿದೆ. ಧಾರಣೆ ಹೆಚ್ಚಿರುವ ಕಾರಣ ಅಡಿಕೆ ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ. ಇಂತಹ ಸ್ಥಿತಿಯಲ್ಲಿ ಹೊರ ದೇಶಗಳಿಂದ ಅಡಿಕೆ ತರಿಸಿಕೊಂಡಲ್ಲಿ ಧಾರಣೆ ಕುಸಿದು ಬೆಳೆಗಾರರು ಬೀದಿಗೆ ಬೀಳಬೇಕಾಗುತ್ತದೆ’ ಎಂದು ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.

‘ಒಮ್ಮೆ ಅಡಿಕೆ ಸಸಿ ನಾಟಿ ಮಾಡಿದರೆ ಫಸಲು ಪಡೆಯಲು ಎಂಟು ವರ್ಷ ಕಾಯಬೇಕು. ನಂತರವೂ ಕೊಳೆರೋಗ ಕಾಣಿಸಿಕೊಂಡರೆ ಬೆಳೆ ಕೈಗೆ ಬರುವ ಖಚಿತತೆ ಇಲ್ಲ. ಅಡಿಕೆಗೆ ನೀರು ಕಡಿಮೆಯಾದರೂ ಕಷ್ಟ. ಹೆಚ್ಚಾದರೂ ಕಷ್ಟ. ಕೇಂದ್ರ ಸರ್ಕಾರ ಆಮದು ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

1 hour ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

11 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago