Advertisement
MIRROR FOCUS

ಕೇಂದ್ರ ಸರಕಾರದ ನೀತಿ ವಿರೋಧಿಸಿ ನ.26ಕ್ಕೆ ಪ್ರತಿಭಟನೆ | ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ನಿರ್ಧಾರ

Share

ಕಿಸಾನ್ ಮೋರ್ಚಾ(Kisan morcha) ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ(central workers Union) ಜಂಟಿ ಸಮಿತಿ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ(central govt) ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ರಾಜ್ಯ ಸರ್ಕಾರದ(state govt) ರೈತ ವಿರೋಧಿ ಕೃಷಿ ಕಾಯ್ದೆಗಳ(anti-people) ರದ್ದುಗೊಳಿಸಿ ಪರ್ಯಾಯ ನೀತಿಗಳನ್ನು ತರುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್(Bengaluru freedom park) ನಲ್ಲಿ ನ.26 ರಿಂದ 28 ವರೆಗೆ 72 ಗಂಟೆಗಳ ಅವಧಿಯ ಮಹಾಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಕುರುವ ಗಣೇಶಪ್ಪ ಹೇಳಿದರು.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರವು ಬಡ ಜನರ ಮೇಲೆ ಜಿಎಸ್ಟಿ ಸೇರಿದಂತೆ ಅನೇಕ ದಿನ ಬಳಕೆ ವಸ್ತುಗಳ ಮೇಲೂ ಬೆಲೆ ಏರಿಕೆ ಮಾಡಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಜೊತೆಗೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ತಂದು ಜನ ತತ್ತರಿಸುವಂತೆ ಮಾಡಿದೆ ಎಂದರು.

Advertisement

ದೆಹಲಿಯಲ್ಲಿ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯಿತು. ಆದರೂ ಕನಿಷ್ಟ ಬೆಂಬಲ ಬೆಲೆ ಕಾಯ್ದೆ ಜಾರಿ, ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಈ ಧೋರಣೆಗಳು ರೈತಾಪಿ ವರ್ಗವನ್ನು ಸಾಲದ ಸುಳಿಗೆ ಸಿಲುಕಿಸಿ ಕೃಷಿಯಿಂದ ಹೊರ ದೂಡಲಾಗುತ್ತಿದೆ. ಕೃಷಿ ಆರ್ಥಿಕತೆ ಬಿಕ್ಕಟ್ಟಿನಲ್ಲಿ ಸಾಗುತ್ತಿದೆ ಎಂದು ಹೇಳಿದರು.

ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು, ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಹಾಗೂ ವಿದ್ಯುತ್‌ಚ್ಚಕ್ತಿ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು, ರೈತರ ಆತ್ಮಹತ್ಯೆ ತಡೆಯುವಲ್ಲಿ ಅಗತ್ಯ ಕ್ರಮ ಕೈಹೊಳ್ಳಬೇಕು, ಫಸಲ್ ಬಿಮಾ ಯೋಜನೆ ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿಗೆ ತರಬೇಕು, ದೆಹಲಿ ರೈತ ಹೋರಾಟದ ಸಂದರ್ಭ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು ಸೇರಿದಂತೆ ಇನ್ನೂ ಅನೇಕ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಈ ಮಹಾಧರಣಿ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

Advertisement

ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಕೇಂದ್ರ ಸರ್ಕಾರಕ್ಕೆ ನಿರ್ಣಯ ತಿಳಿಸಬೇಕು, ರೈತರ ಐ.ಪಿ. ಸೆಟ್‌ಗಳಿಗೆ ರೈತರೇ ಸ್ವಯಂ ವೆಚ್ಚದಲ್ಲಿ ಕಂಬ, ತಂತಿ, ಟಿಸಿ ಹಾಕಿಸಿಕೊಳ್ಳಬೇಕು ಎನ್ನುವ ಆದೇಶ ರದ್ದು ಮಾಡಬೇಕು ಸೇರಿದಂತೆ ಇನ್ನೂ ಹಲವು ಬೇಡಿಕೆಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಮಹಾಧರಣಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ, ಜಿಲ್ಲಾಧ್ಯಕ್ಷ ಪಿ.ಪಿ.ಮರುಳಸಿದ್ದಪ್ಪ, ಸಂತೋಷ್ ನಾಯ್ಕ, ಅಭಿಲಾಷ್, ಮಾಯಕೊಂಡದ ಬೀರಪ್ಪ, ಮಲ್ಲೇನಹಳ್ಳಿ ನಾಗರಾಜ್, ಕೈದಾಳ್ ಓಂಕಾರಯ್ಯ ಇತರರು ಇದ್ದರು.

The joint committee of Kisan Morcha and Central Workers Union held a strike at Freedom Park, Bengaluru from 26th to 28th, demanding to reverse the anti-people policies of the central government and bring alternative policies to repeal the anti-farmer agricultural laws of the state government. Karnataka State Farmers Association and Green Sena State Honorary President Kuru Ganeshappa said that the hour-long strike was called.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

9 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

9 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

9 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

10 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

13 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

13 hours ago