ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.19ರಂದು ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ಸಾರಿಗೆ ನೌಕರರು ಎದುರಿಸುತ್ತಿರುವ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಇಲಾಖೆ ಮತ್ತು ನಿಗಮಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆ ಎಲ್ಲಾ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು, ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿಯಾಗಬೇಕು. ಏಕರೂಪ ಶಿಸ್ತು ಕ್ರಮ ಜಾರಿಯಾಗಬೇಕು, ನಿವೃತ್ತಿ, ನಿಧನ ಮತ್ತು ಸ್ವಯಂ ನಿವೃತ್ತಿ ಕಾರ್ಮಿಕರ ಬಾಕಿ ಹಣ ಬಿಡುಗಡೆ ಆಗಬೇಕು. ವಜಾಗೊಂಡ ನೌಕರರನ್ನ ಮರುನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಸರ್ಕಾರ ಸಭೆ ನಡೆಸಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್ 19 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…