ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.19ರಂದು ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ಸಾರಿಗೆ ನೌಕರರು ಎದುರಿಸುತ್ತಿರುವ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಇಲಾಖೆ ಮತ್ತು ನಿಗಮಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆ ಎಲ್ಲಾ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು, ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿಯಾಗಬೇಕು. ಏಕರೂಪ ಶಿಸ್ತು ಕ್ರಮ ಜಾರಿಯಾಗಬೇಕು, ನಿವೃತ್ತಿ, ನಿಧನ ಮತ್ತು ಸ್ವಯಂ ನಿವೃತ್ತಿ ಕಾರ್ಮಿಕರ ಬಾಕಿ ಹಣ ಬಿಡುಗಡೆ ಆಗಬೇಕು. ವಜಾಗೊಂಡ ನೌಕರರನ್ನ ಮರುನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಸರ್ಕಾರ ಸಭೆ ನಡೆಸಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್ 19 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…