ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.19ರಂದು ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ಸಾರಿಗೆ ನೌಕರರು ಎದುರಿಸುತ್ತಿರುವ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಇಲಾಖೆ ಮತ್ತು ನಿಗಮಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆ ಎಲ್ಲಾ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು, ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿಯಾಗಬೇಕು. ಏಕರೂಪ ಶಿಸ್ತು ಕ್ರಮ ಜಾರಿಯಾಗಬೇಕು, ನಿವೃತ್ತಿ, ನಿಧನ ಮತ್ತು ಸ್ವಯಂ ನಿವೃತ್ತಿ ಕಾರ್ಮಿಕರ ಬಾಕಿ ಹಣ ಬಿಡುಗಡೆ ಆಗಬೇಕು. ವಜಾಗೊಂಡ ನೌಕರರನ್ನ ಮರುನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಸರ್ಕಾರ ಸಭೆ ನಡೆಸಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್ 19 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…