ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜೆ.ಪಿ. ನಡ್ಡಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಸಭೆ ನಡೆಸಿದ್ದು, ಕಿದ್ವಾಯಿ ಆಸ್ಪತ್ರೆಯಲ್ಲಿ ಈ ಚಿಕಿತ್ಸಾ ಸೌಲಭ್ಯ ಅಳವಡಿಸಲು ಆರ್ಥಿಕ ನೆರವು ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾರ್ಷಿಕ 21 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆಯಿದೆ. ಪ್ರೋಟಾನ್ ಥೆರಪಿ ಚಿಕಿತ್ಸೆ ಅತ್ಯಾಧುನಿಕವಾಗಿದ್ದು, ನಿರ್ಣಾಯಕ ಅಂಗಗಳಿಗೆ ಯಾವ ರೀತಿಯ ಹಾನಿ ಮಾಡುವುದಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ದೀರ್ಘಕಾಲಿಕ ಅಡ್ಡ ಪರಿಣಾಮಗಳನ್ನು ತಗ್ಗಿಸುತ್ತದೆ. ರೇಡಿಯೋ ತೆರೆಪಿಗಿಂತಲೂ ಭಿನ್ನವಾಗಿದೆ. ಸಮಸ್ಯೆಯಿರುವ ಭಾಗಕ್ಕೆ ಮಾತ್ರ ಚಿಕಿತ್ಸೆ ದೊರೆಯುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ ಅಳವಡಿಸುವುದರಿಂದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ನಿಮ್ಹಾನ್ಸ್ ನ ರೋಗಿಗಳಿಗೂ ಸೌಲಭ್ಯ ದೊರೆಯಲಿದೆ ಎಂದು ವಿವರಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…