ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |

November 25, 2023
1:20 PM

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾಗಿದ್ದಾರೆ.

ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಪೊಲೀಸ್‌ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಬ್ಯಾರಿಕೇಡ್‌ಗಳನ್ನ ಹಾಕಿ ಅಂತಿಮ‌‌ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂತಹ ದಿನ ಬರುತ್ತೆ ಅಂತಾ ಊಹೆ ಮಾಡಿರಲಿಲ್ಲ. ನಿಜಕ್ಕೂ ಬಹಳ ನೋವಾಗ್ತಿದೆ‌. ವೀರ ಯೋಧನನ್ನು ಕಳೆದುಕೊಂಡು ನಾಡು ತಬ್ಬಲಿಯಾಗಿದೆ. ದೇವರು ಕುಟುಂಬಕ್ಕೆ ಅವರ ಆಗಲಿಕೆ ನೋವು ಭರಿಸುವ ಶಕ್ತಿ ನೀಡಲಿ. ಅಂತಿಮ ದರ್ಶನದ ಮೂಲಕ ಗೌರವ ಸಮರ್ಪಣೆಗೆ ಬಂದಿದ್ದೇವೆ ಎಂದು ಅಂತಿಮ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ವಿಷಾದ ವ್ಯಕ್ತಪಡಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Mysore-based Captain M.V. Arrangements have been made for the final darshan of Captain Pranjal. A large number of people have arrived and are paying their last respects to the brave martyr. Pranjal is the only son of Venkatesh, who was an MD in Mangalore's MRPL. He completed his education in Mangalore and Bangalore and joined the army. He was leading the 63 Rashtriya Rifles. Martyred in an encounter with terrorists in Rajouri, Jammu and Kashmir.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror