ಎಫ್ ಡಿ ಎ ಕೆಲಸ ಕೊಡಿಸುವುದಾಗಿ ವಂಚನೆ | ಪಿಎಸ್ಐ ಅಶ್ವಿನಿ ಅಮಾನತು |

September 19, 2022
7:52 PM

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror