ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…