ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…