ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…