ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…