ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬವರಿಂದ ಹಣ ಪಡೆದು ವಂಚನೆ ಮಾಡಿದ್ದರು. ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷ ರೂಪಾಯಿ ಬೇಡಿಕೆಯನ್ನು ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಈ ಪ್ರಕರಣದ ಬಗ್ಗೆ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…